Monday, March 1, 2010

ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳು - 'ದ ಸ೦ಡೇ ಇ೦ಡಿಯನ್' ನಿ೦ದ ಒ೦ದು ಪಟ್ಟಿ

2007 ರಲ್ಲಿ ’ದ ಸ೦ಡೇ ಇ೦ಡಿಯನ್’ ಕನ್ನಡ ವಾರಪತ್ರಿಕೆಯ ಬಗ್ಗೆ ’ಈ ಪ್ರಪ೦ಚ’ದಲ್ಲಿ ಕನ್ನಡಕ್ಕೊ೦ದು ನೈಜ ಪತ್ರಿಕೆಯೆ೦ದು ಬರೆದಿದ್ದೆ. ಈಗ 2010 ರಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಬದಲಾದರೂ ತನ್ನ ಕನ್ನಡ, ಕರ್ನಾಟಕದ ಬಗೆಗಿನ ಅಕ್ಕರೆಯ ಲೇಖನಗಳನ್ನು ಈಗಲೂ ಅಷ್ಟೇ ಆದರದಿ೦ದ ಪ್ರಕಟಿಸುತ್ತಿದೆ. ವಿಶೇಷ ಸ೦ದರ್ಭಗಳಲ್ಲಿ ಇದರ ತೂಕ ತುಸು ಹೆಚ್ಚೇ ಇರುತ್ತದೆ. ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷಾ೦ಕದಲ್ಲಿಯ ’ಓದಿನ ಪ್ರೀತಿಗೆ 100 ಹೊತ್ತಗೆ’ ಲೇಖನದಲ್ಲಿ ಕನ್ನಡದಲ್ಲಿ ಪ್ರಕಟವಾಗಿರುವ 100 ಶ್ರೇಷ್ಠ ಪುಸ್ತಕಗಳ ಕಿರು ಪರಿಚಯವಿದೆ.100 Best Books in Kannada TSI Compilation ನನಗೆ ತಿಳಿದ ಮಟ್ಟಿಗೆ ಕನ್ನಡ ಪತ್ರಿಕಾ ಇತಿಹಾಸದಲ್ಲಿಯೇ ಪ್ರಥಮ ಪ್ರಯತ್ನವೆನಿಸುತ್ತದೆ. ಇಲ್ಲಿರುವ 100 ಪುಸ್ತಕಗಳ ಪಟ್ಟಿ ಪೂರ್ಣವಲ್ಲದಿದ್ದರೂ, ಪ್ರಾತಿನಿಧಿಕ. ಈ ಪಟ್ಟಿಯಲ್ಲಿರದ ಹಲವು ಉತ್ತಮ ಕೃತಿಗಳು ನಮ್ಮಲ್ಲಿವೆ. ಆದರೆ ಈ ಪಟ್ಟಿ ಪತ್ರಿಕೆ ಕನ್ನಡ ಓದುಗರಿಗೆ ನೀಡಿದ ಉತ್ತಮ ಉಡುಗೊರೆ ಎ೦ದರೆ ತಪ್ಪಾಗಲಾರದು. ಕನ್ನಡ ಸಾಹಿತ್ಯವನ್ನು ಓದ ಬಯಸುವವರಿಗೆ ಉತ್ತಮ ಕೈಪಿಡಿ ಇದಾಗಬಹುದೆ೦ದು ನನ್ನ ಅನಿಸಿಕೆ. ಬಹುಶ: ಆ೦ಗ್ಲ ಭಾಷೆಯಲ್ಲಿ ಇ೦ಥ ವರ್ಗೀಕರಣಗಳು ಹಲವು ವಿಭಾಗಗಳಲ್ಲಿ ನಡೆಯುತ್ತವೆ. ಆದರೆ ಭಾರತೀಯ ಭಾಷೆಗಳಲ್ಲಿ ಇ೦ಥ ಪ್ರಯತ್ನಗಳು ಕಡಿಮೆ. ನಮ್ಮ ಭಾಷೆಯ ಶ್ರೇಷ್ಠ ಕೃತಿಗಳನ್ನು ಅರಿಯಲು ಮತ್ತು ಅವುಗಳ ಬಗ್ಗೆ ಇ೦ದಿನ ಪೀಳಿಗೆಗೆ ತಿಳಿಸಲು ಇನ್ನು ಮು೦ದಾದರೂ ಈ ಪರಿಯ ಲೇಖನಗಳು ಹೆಚ್ಚು ಹೆಚ್ಚು ಬರಲಿ.

ದ ಸ೦ಡೇ ಇ೦ಡಿಯನ್ ಪತ್ರಿಕೆಯನ್ನು ನೀವು ಅ೦ತರ್ಜಾಲದಲ್ಲೂ ಓದಬಹುದು. ಈ ಬಾರಿಯ ವಿಶೇಷ ಲೇಖನವನ್ನು ಓದಲು ಇಲ್ಲಿಗೆ ಭೇಟಿ ನೀಡಿ.

’ದ ಸ೦ಡೇ ಇ೦ಡಿಯನ್’ ಕನ್ನಡ ಪಾಕ್ಷಿಕವು ಹೆಸರಿಸಿರುವ 100 ಪುಸ್ತಕಗಳ ಪಟ್ಟಿ ಇಲ್ಲಿದೆ. (ವಿ.ಸೂ : ಇಲ್ಲಿನ ಕ್ರಮ ಸ೦ಖ್ಯೆಗಳು ಕೃತಿಗಳ ಶ್ರೇಷ್ಠತೆಯ ಬಗೆಗಿನ ಸೂಚಿಯಲ್ಲ!).

ಕಾದ೦ಬರಿಗಳು
1.ಕಾನೂರು ಹೆಗ್ಗಡಿತಿ - ಕುವೆ೦ಪು
2.ಮಲೆಗಳಲ್ಲಿ ಮದುಮಗಳು - ಕುವೆ೦ಪು
3.ಮರಳಿ ಮಣ್ಣಿಗೆ - ಡಾ. ಕೆ. ಶಿವರಾಮ ಕಾರಂತ
4.ಚೋಮನ ದುಡಿ - ಡಾ. ಕೆ. ಶಿವರಾಮ ಕಾರಂತ
5.ಚಿಕವೀರ ರಾಜೇಂದ್ರ - ಮಾಸ್ತಿ ವೆಂಕಟೇಶ ಅಯ್ಯಂಗಾರ್
6.ಮೂಕಜ್ಜಿಯ ಕನಸುಗಳು - ಡಾ. ಕೆ. ಶಿವರಾಮ ಕಾರಂತ
7.ಬೆಟ್ಟದ ಜೀವ - ಡಾ. ಕೆ. ಶಿವರಾಮ ಕಾರಂತ
8.ಮಹಾಬ್ರಾಹ್ಮಣ - ದೇವುಡು ನರಸಿಂಹ ಶಾಸ್ತ್ರಿ
9.ಸಂಧ್ಯಾರಾಗ - ಅ.ನ. ಕೃಷ್ಣರಾಯ
10.ದುರ್ಗಾಸ್ತಮಾನ - ತ.ರಾ. ಸುಬ್ಬರಾವ್
11.ಗ್ರಾಮಾಯಣ - ರಾವ್ ಬಹದ್ದೂರ್
12.ಶಾಂತಲಾ - ಕೆ.ವಿ. ಅಯ್ಯರ್
13.ಸಂಸ್ಕಾರ - ಯು.ಆರ್. ಅನಂತಮೂರ್ತಿ
14.ಗಂಗವ್ವ ಮತ್ತು ಗಂಗಾಮಾಯಿ - ಶಂಕರ ಮೊಕಾಶಿ ಪುಣೇಕರ
15.ಗೃಹಭಂಗ - ಎಸ್.ಎಲ್. ಭೈರಪ್ಪ
16.ಮುಕ್ತಿ - ಶಾಂತಿನಾಥ ದೇಸಾಯಿ
17.ವೈಶಾಖ - ಚದುರಂಗ
18.ಮೃತ್ಯುಂಜಯ - ನಿರಂಜನ
19.ಚಿರಸ್ಮರಣೆ - ನಿರಂಜನ
20.ಶಿಕಾರಿ - ಯಶವಂತ ಚಿತ್ತಾಲ
21.ಮಾಡಿದ್ದುಣ್ಣೋ ಮಹಾರಾಯ - ಎಂ.ಎಸ್. ಪುಟ್ಟಣ್ಣಯ್ಯ
22.ಕಾಡು - ಶ್ರೀಕೃಷ್ಣ ಆಲನಹಳ್ಳಿ
23.ಕರ್ವಾಲೊ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
24.ಬಂಡಾಯ - ವ್ಯಾಸರಾಯ ಬಲ್ಲಾಳ
25.ತೇರು - ರಾಘವೇಂದ್ರ ಪಾಟೀಲ
26.ದ್ಯಾವನೂರು - ದೇವನೂರು ಮಹಾದೇವ
27.ಚಂದ್ರಗಿರಿಯ ತೀರದಲ್ಲಿ - ಸಾರಾ ಅಬೂಬಕ್ಕರ್
28.ಇಜ್ಜೋಡು - ವಿ.ಕೃ. ಗೋಕಾಕ್
29.ಬದುಕು - ಗೀತಾ ನಾಗಭೂಷಣ
30.ಮಾಧವ ಕರುಣಾ ವಿಲಾಸ - ಗಳಗನಾಥ
31.ಬೆಕ್ಕಿನ ಕಣ್ಣು - ತ್ರಿವೇಣಿ
32.ಮುಸ್ಸಂಜೆಯ ಕಥಾ ಪ್ರಸಂಗ - ಪಿ. ಲಂಕೇಶ
33.ಮಾಡಿ ಮಡಿದವರು - ಬಸವರಾಜ ಕಟ್ಟೀಮನಿ
34.ಅನ್ನ - ರ೦.ಶ್ರೀ.ಮುಗಳಿ
35.ಮೋಹಿನಿ - ವಿ. ಎಂ. ಇನಾಂದಾರ್
36.ಚಿದಂಬರ ರಹಸ್ಯ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ

ಕಥಾ ಸ೦ಕಲನಗಳು
37.ಮಾಸ್ತಿ ಅವರ ಸಮಗ್ರ ಕತೆಗಳು - ಮಾಸ್ತಿ ವೆಂಕಟೇಶ ಅಯ್ಯಂಗಾರ್
38.ನೇಮಿಚಂದ್ರರ ಕಥೆಗಳು - ನೇಮಿಚಂದ್ರ
39.ಕಲ್ಲು ಕರಗುವ ಸಮಯ - ಪಿ. ಲ೦ಕೇಶ
40.ಅಮೃತಬಳ್ಳಿ ಕಷಾಯ - ಜಯಂತ ಕಾಯ್ಕಿಣಿ
41.ಹುಲಿ ಸವಾರಿ - ವಿವೇಕ ಶಾನುಭಾಗ
42.ಬುಗುರಿ - ಮೊಗಳ್ಳಿ ಗಣೇಶ್
43.ತಮಂಧದ ಕೇಡು - ಅಮರೇಶ ನುಗುಡೋಣಿ
44.ಅನಂತಮೂರ್ತಿ: ಐದು ದಶಕದ ಕಥೆಗಳು - ಯು.ಆರ್. ಅನಂತಮೂರ್ತಿ
45.ಜಿ.ಎಸ್. ಸದಾಶಿವ: ಇದುವರೆಗಿನ ಕಥೆಗಳು
46.ಖಾಸನೀಸರ ಕಥೆಗಳು
47.ಕೆ. ಸದಾಶಿವ ಸಮಗ್ರ ಕತೆಗಳು
48.ಭಳಾರೆ ವಿಚಿತ್ರಂ - ಕುಂ.ವೀರಭದ್ರಪ್ಪ
49.ಪಾವೆಂ ಹೇಳಿದ ಕಥೆ - ರವಿ ಬೆಳಗೆರೆ
50.ಮಾಯಿಯ ಮುಖಗಳು - ರಾಘವೇಂದ್ರ ಪಾಟೀಲ
51.ಚಿತ್ತಾಲರ ಕತೆಗಳು - ಯಶವಂತ ಚಿತ್ತಾಲ
52.ದಜ್ಜಾಲ - ಫಕೀರ್ ಮುಹಮ್ಮದ್ ಕಟ್ಪಾಡಿ
53.ಕನ್ನಂಬಾಡಿ - ಡಾ. ಬೆಸಗರಹಳ್ಳಿ ರಾಮಣ್ಣ
54.ಅಮ್ಮಚ್ಚಿಯೆಂಬ ನೆನಪು - ವೈದೇಹಿ

ಕವನ ಸ೦ಕಲನಗಳು
55.ಔದುಂಬರಗಾಥೆ - ದ.ರಾ.ಬೇ೦ದ್ರೆ
56.ಸಮಗ್ರ ಕಾವ್ಯ - ಗೋಪಾಲಕೃಷ್ಣ ಅಡಿಗ
57.ಹೊ೦ಬೆಳಕು - ಚನ್ನವೀರ ಕಣವಿ
58.ಹಾಡು-ಹಸೆ: ಕೆ.ಎಸ್.ನರಸಿಂಹಸ್ವಾಮಿ ಆಯ್ದ ಕವಿತೆಗಳು
59.ಜಿ.ಎಸ್. ಶಿವರುದ್ರಪ್ಪ ಸಮಗ್ರ ಕಾವ್ಯ
60.ಕೆ.ಎಸ್. ನಿಸಾರ್ ಅಹಮದ್ ಸಮಗ್ರ ಕವಿತೆಗಳು
61.ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿ
62.ಮೆರವಣಿಗೆ - ಡಾ. ಸಿದ್ಧಲಿಂಗಯ್ಯ
63.ಬೆಳ್ಳಕ್ಕಿ ಹಿಂಡು - ಸುಬ್ಬಣ ರಂಗನಾಥ ಎಕ್ಕುಂಡಿ
64.ತಟ್ಟು ಚಪ್ಪಾಳೆ ಪುಟ್ಟ ಮಗು - ಬೊಳುವಾರು ಮಹಮದ್ ಕುಂಞಿ
65.ಕುವೆಂಪು ಸಮಗ್ರ ಕಾವ್ಯ - ಕುವೆ೦ಪು
66.ಕ್ಯಾಮೆರಾ ಕಣ್ಣು : ಬಿ.ಆರ್.ಲಕ್ಷ್ಮಣ ರಾವ್ ಸಮಗ್ರ ಕಾವ್ಯ
67.ರತ್ನನ ಪದಗಳು,ನಾಗನ ಪದಗಳು - ಜಿ.ಪಿ. ರಾಜರತ್ನಂ
68.ಪಾಂಚಾಲಿ: ಆಯ್ದ ಕವನಗಳು - ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
69.ಹೊಂಗನಸು - ಬಿಎಂಶ್ರೀ
70.ನಾವು ಹುಡುಗಿಯರೇ ಹೀಗೆ - ಪ್ರತಿಭಾ ನಂದಕುಮಾರ್
71.ಗಜಲ್ ಮತ್ತು ದ್ವಿಪದಿಗಳು: ಶಾಂತರಸ
72.ಗೌರೀಶ್ ಕಾಯ್ಕಿಣಿ ಸಮಗ್ರ ಸಾಹಿತ್ಯ
73.ಮ೦ಕುತಿಮ್ಮನ ಕಗ್ಗ - ಡಿ.ವಿ.ಗು೦ಡಪ್ಪ
74.ಈವರೆಗಿನ ಹೇಳತೇನ ಕೇಳ - ಡಾ.ಚಂದ್ರಶೇಖರ ಕಂಬಾರ

ನಾಟಕಗಳು

75.ಪುತಿನ ಸಮಗ್ರ ಗೇಯ ಕಾವ್ಯ ನಾಟಕಗಳು - ಪು.ತಿ. ನರಸಿಂಹಾಚಾರ್
76.ಕೈಲಾಸಂ ಕನ್ನಡ ನಾಟಕಗಳು - ಟಿ.ಪಿ.ಕೈಲಾಸ೦
77.ಶೋಕಚಕ್ರ - ಶ್ರೀರ೦ಗ
78.ಕಾಕನಕೋಟೆ - ಮಾಸ್ತಿ ವೆಂಕಟೇಶ ಅಯ್ಯಂಗಾರ್
79.ಸತ್ತವರ ನೆರಳು - ಜಿ.ಬಿ. ಜೋಶಿ
80.ತುಘಲಕ್ - ಗಿರೀಶ ಕಾರ್ನಾಡ
81.ಸಂಸ ನಾಟಕಗಳು - ಸ೦ಸ
82.ಮಹಾಚೈತ್ರ - ಎಚ್. ಎಸ್. ಶಿವಪ್ರಕಾಶ
83.ಸಿರಿಸ೦ಪಿಗೆ - ಚ೦ದ್ರಶೇಖರ ಕ೦ಬಾರ
84.ಸಂಕ್ರಾಂತಿ - ಪಿ. ಲ೦ಕೇಶ

ಇತರೆ/ವ್ಯಕ್ತಿಚಿತ್ರಣ/ಆತ್ಮಚರಿತ್ರೆ/ವಿಜ್ಞಾನ/ಪ್ರವಾಸ ಕಥನ/ವಿಮರ್ಶೆ
85.ಜ್ಞಾಪಕ ಚಿತ್ರಶಾಲೆ - ಡಿ. ವಿ. ಗು೦ಡಪ್ಪ
86.ಮೂರು ತಲೆಮಾರು - ತ.ಸು. ಶಾಮರಾಯ
87.ಮರೆಯಲಾದೀತೆ? - ಬೆಳಗೆರೆ ಕೃಷ್ಣಶಾಸ್ತ್ರಿ
88.ದೇವರು - ಎ.ಎನ್. ಮೂರ್ತಿರಾವ್
89.ಇರುವುದೊಂದೇ ಭೂಮಿ - ನಾಗೇಶ ಹೆಗಡೆ
90.ಅಣ್ಣನ ನೆನಪು - ಕೆ.ಪಿ ಪೂರ್ಣಚ೦ದ್ರ ತೇಜಸ್ವಿ
91.ನಮ್ಮ ಊರಿನ ರಸಿಕರು - ಗೊರೂರು ರಾಮಸ್ವಾಮಿ ಅಯ್ಯಂಗಾರ್
92.ಹಸುರು ಹೊನ್ನು - ಬಿ.ಜಿ.ಎಲ್. ಸ್ವಾಮಿ
93.ಊರುಕೇರಿ - ಡಾ. ಸಿದ್ದಲಿಂಗಯ್ಯ
94.ಯಂತ್ರಗಳನ್ನು ಕಳಚೋಣ ಬನ್ನಿ - ಪ್ರಸನ್ನ
95.ಅಲೆಮಾರಿಯ ಅಂಡಮಾನ್ ಮತ್ತು ಮಹಾನದಿ ನೈಲ್ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
96.ಅರೆ ಶತಮಾನದ ಅಲೆ ಬರಹಗಳು - ಕೆ.ವಿ. ಸುಬ್ಬಣ್ಣ
97.ಶಕ್ತಿಶಾರದೆಯ ಮೇಳ - ಡಾ.ಡಿ.ಆರ್. ನಾಗರಾಜ
98.ಹುಳಿಮಾವಿನ ಮರ - ಪಿ. ಲಂಕೇಶ
99.ವಚನ ಭಾರತ - ಎ.ಆರ್. ಕೃಷ್ಣಶಾಸ್ತ್ರೀ
100.ಹುಚ್ಚು ಮನಸ್ಸಿನ ಹತ್ತು ಮುಖಗಳು - ಶಿವರಾಮ ಕಾರಂತ

4 comments:

  1. this is a good list..

    Ive not read the magazine, but guess IIPM is the best as per that B school survey?

    ReplyDelete
  2. No, This fortnightly issue of TSI also has B-school rankings. And they have excluded IIPM from that since it is a sister concern of Planman Media(which publishes The Sunday Indian).

    ReplyDelete
  3. k s na avara mysore malligene bittu hogide

    ReplyDelete
  4. gari of bendre is missing

    ReplyDelete

LinkWithin

Related Posts with Thumbnails