Friday, July 2, 2010

ಆಕೃತಿ ಪುಸ್ತಕ ಮಳಿಗೆಯಲ್ಲಿ ವಸುಧೇ೦ದ್ರರಿ೦ದ ’ರಕ್ಷಕ ಅನಾಥ’ದ ಪ್ರಬ೦ಧ ವಾಚನ

ವಸುಧೇಂದ್ರ ಪ್ರಬಂಧ ಬರೆಯುವಷ್ಟೇ ಚೆನ್ನಾಗಿ, ಅದನ್ನು ಓದುವರೇ? ನಾವು ಅವರ ಪುಸ್ತಕವನ್ನು ಓದಿ ಆನಂದಿಸುವುದಕ್ಕಿಂತ, ಅವರಿಂದಲೇ ಅದನ್ನು ಓದಿಸಿದಾಗ ನಮಗೆ ಹೆಚ್ಚು ಆನಂದ ಸಿಗುವುದೇ? ಇವೆಲ್ಲಾ ಕುತೂಹಲಕ್ಕೆ, ಉತ್ತರ ನಿಮಗೆ 11 ಜುಲೈ 2010 ಭಾನುವಾರ, ಆಕೃತಿ ಪುಸ್ತಕ ಮಳಿಗೆಯಲ್ಲಿ ಸಿಗಲಿದೆ!ಬನ್ನಿ,ಭಾಗವಹಿಸಿ, ವಸುಧೇಂದ್ರರ ಜೊತೆ ಹರಟೆ ಹೊಡೆಯೋಣ! ವಸುಧೇಂದ್ರರ ಪುಸ್ತಕದಲ್ಲಿ ನಮಗೆ ಇಷ್ಟವಾದದ್ದನ್ನ, ಇಷ್ಟವಾಗದೆ ಇದ್ದದ್ದನ್ನ ಹೇಳೋಣ! ವಸುಧೇಂದ್ರರಿಗೆ ಸರಿ ಬಂದರೆ ನಮ್ಮ ಹರಟೆ ಅವರ ಮುಂದಿನ ಪುಸ್ತಕದಲ್ಲಿ ಪ್ರಬಂಧವಾಗಬಾರದೇಕೆ?

ಸ್ಥಳ: ಆಕೃತಿ ಬುಕ್ಸ್
ನಂ. 28 ( ಹಳೆ ನಂ: 733), 2ನೇ ಮಹಡಿ,
12 ನೇ ಮುಖ್ಯರಸ್ತೆ, 3 ನೇ ಬ್ಲಾಕ್,
ರಾಜಾಜಿನಗರ, ಬೆಂಗಳೂರು- 560010
ದಿನಾಂಕ : ಭಾನುವಾರ, 11 ಜುಲೈ 2010
ಸಮಯ: ಬೆಳಗ್ಗೆ 11 ಘಂಟೆಗೆ
ಗುರುತು: ಇ. ಎಸ್. ಐ. ಆಸ್ಪತ್ರೆ ಹತ್ತಿರ, ಸ್ವಾತಿ ಗಿಫ್ಟ್ ಸೆಂಟರ್‌‍ನ ಪಕ್ಕ, ಎಫ್-ಸ್ಕ್ವಾರ್ ಮಳಿಗೆಯ ಮೇಲೆ
ಹೆಚ್ಚಿನ ವಿವರಗಳಿಗೆ ದೂರವಾಣಿಯಲ್ಲಿ ಸಂಪರ್ಕಿಸಲು: 9886694580

ನೀವೂ ಬನ್ನಿ, ನಿಮ್ಮ ಗೆಳೆಯರನ್ನೂ ಕರೆತನ್ನಿ..

LinkWithin

Related Posts with Thumbnails